Rajkumar_Films

Sunday 29 May 2011

ಮುಂಗಾರು ಮಳೆ(2006)-ಅರಳುತಿರು ಜೀವದ ಗೆಳೆಯ


ಸಂಗೀತ : ಮನೋಮೂರ್ತಿ
ಸಾಹಿತ್ಯ : ಜಯಂತ್ ಕೈಕಿಣಿ
ಗಾಯಕರು : ಶ್ರೆಯಾ
ಹೆಣ್ಣು : ಅರಳುತಿರು ಜೀವದ ಗೆಳೆಯ
ಸ್ನೇಹದ ಸಿಂಚನದಲ್ಲಿ
ಬಾಡದಿರು ಸ್ನೇಹದ ಹೂವೆ
ಪ್ರೇಮದ ಬಂಧನದಲ್ಲಿ
ಮನಸಲ್ಲೇ ಇರಲಿ ಭಾವನೆ
ಮಿಡಿಯುತಿರಲಿ ಮೌನವೀಣೆ
ಹೀಗೆ ಸುಮ್ಮನೆ
ಅರಳುತಿರು ಜೀವದ ಗೆಳೆಯ
ಹಕ್ಕಿಯು ಹಾಡಿದೆ
ತನ್ನ ಹೆಸರನು ಹೇಳದೆ
ಸಂಪಿಗೆ ಬೀರಿದೆ ಕಂಪನು
ಯಾರಿಗು ಕೇಳದೆ
ಬೀಸುವ ಗಾಳಿಯ ಹಕ್ಕಿಯ ಹಾಡಿನ
ನಂಟಿಗೆ ಹೆಸರಿನ ಹಂಗಿಲ್ಲ
ನಮಗೇಕೆ ಅದರ ಯೋಚನೆ
ಬೇಡ ಗೆಳಯ ನಂಟಿಗೆ ಹೆಸರು
ಯಾಕೇ ಸುಮ್ಮನೆ ಏ.ಏ..
ಅರಳುತಿರು ಜೀವದ ಗೆಳೆಯ
ಮಾತಿಗೆ ಮೀರಿದ
ಭಾವದ ಸೆಳೆತವೆ ಸುಂದರ
ನಲುಮೆಯು ತುಂಬಿದ
ಮನಸಿಗೆ ಬಾರದು ಬೇಸರ
ಬಾಳ ದಾರಿಯಲಿ ಬೇರೆ ಆದರು
ಚಂದಿರ ಬರುವನು ನಮ್ಮ ಜೊತೆ
ಕಾಣುವೆನು ಅವನಲಿ ನಿನ್ನನೇ
ಇರಲಿ ಗೆಳೆಯ ಈ ಅನುಬಂಧ
ಹೀಗೇ ಸುಮ್ಮನೆ
ಅರಳುತಿರು ಜೀವದ ಗೆಳೆಯ
ಸ್ನೇಹದ ಸಿಂಚನದಲ್ಲಿ
ಬಾಡದಿರು ಸ್ನೇಹದ ಹೂವೆ
ಪ್ರೇಮದ ಬಂಧನದಲ್ಲಿ
ಮನಸಲ್ಲೇ ಇರಲಿ ಭಾವನೆ
ಮಿಡಿಯುತಿರಲಿ ಮೌನವೀಣೆ
ಹೀಗೆ ಸುಮ್ಮನೆ
ಅರಳುತಿರು ಜೀವದ ಗೆಳೆಯ

No comments:

Post a Comment